ಪೋಸ್ಟ್‌ಗಳು

ಸೆಪ್ಟೆಂಬರ್, 2008 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

’ಒಕ್ಕಲತನದ ಮ್ಯಾಲ ನನಗ ಭಾಳ ಒಲವು’

ಇಮೇಜ್
ತಮ್ಮ ಕಲಾಕೃತಿಗಳಲ್ಲಿ ಹೈದರಾಬಾದ್ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಕಲ್ಬುರ್ಗಿ ಸುತ್ತಲಿನ ಬದುಕಿನ ಅನುಭವ- ಜೀವಂತಿಕೆಯನ್ನು ಚಿತ್ರಿಸುವ ವಿ.ಜಿ. ಅಂದಾನಿಯವರು ಪ್ರಾದೇಶಿಕ ಅನನ್ಯ ಶೈಲಿಯ ಮೂಲಕ ಹೆಸರುವಾಸಿಯಾಗಿರುವವರು. ಕಲ್ಬುರ್ಗಿಯಂತಹ ಬರಡು ನೆಲದಲ್ಲಿ ` ಐಡಿಯಲ್ ಫೈನ್ ಆರ್ಟ್‌ ಸ್ಕೂಲ್ ' ಮೂಲಕ ಕಲಾಪರಂಪರೆಯನ್ನು ಹುಟ್ಟುಹಾಕಿರುವ ಅಂದಾನಿಯವರು ತಮ್ಮ ಕುಟುಂಬ , ನೆನಪು- ಹಳಹಳಿಕೆ- ಕನಸುಗಳನ್ನು ಮನಬಿಚ್ಚಿ ಮಾತನಾಡುತ್ತಾರೆ. ` ನಮ್ಮೂರು ಕಲ್ಬುರ್ಗಿಗೆ 25 ಕಿ.ಮೀ. ದೂರದಲ್ಲಿರುವ ಕಿರಣಗಿ. ನಾ ಸಣ್ಣಾವ್ದಿದಾಗ ನಮ್ಮದು ಜಾಯಿಂಟ್ ಫ್ಯಾಮಿಲಿ. ಒಬ್ಬ ಅಕ್ಕ ಸೇರಿದಂತೆ 11 ಸಹೋದರರಲ್ಲಿ ನಾನೇ ಕಡೆಯವ. ನಿಜಾಂ ಕಾಲದಲ್ಲಿ ಪಟವಾರಿ ಆಗಿದ್ದ ಅಜ್ಜ ಭಾರೀ ಮನಸ್ಯಾ ಇದ್ದ . ಅವನಿಂದಾನೇ ಮನ್ಯಾಗ ಎಲ್ಲರಿಗಿ ಎಜ್ಯುಕೇಷನ್ ಸಿಕ್ಕಿದ್ದು. ಆದ್ರ ನಮ್ಮ ಫಾದರ್ ಮಾತ್ರ ಪೂರ್ತಿ ಹೊಲಾನೇ ನಂಬಿ ಬದುಕಿದ್ದವರು. ನನಗೂ ಒಕ್ಕಲತನದ ಮ್ಯಾಲ ಭಾಳ ಒಲವ ಐತಿ. ಈಗೀಗ ಕಲ್ಬುರ್ಗಿ ಊರ ಹೊರಗ ಒಂದೀಟು ಹೊಲ ತಗೊಂಡು ತೋಟ-ಪಟ್ಟಿ ತರಹ ಮಾಡಬೇಕು ಅಂತ ಅಂದುಕೊಂಡೀನಿ ' ಎಂದು ತಮ್ಮ ಹಿನ್ನೆಲೆ ಮತ್ತು ` ಕನಸು ' ವಿವರಿಸುತ್ತಾರೆ. ` ನಮ್ಮೂರಿಗೆ ಸನೀಪದ ದೊಡ್ಡ ಊರಂದ್ರ ಎಸಿಸಿ ಫ್ಯಾಕ್ಟರಿಯಿಂದ ಫೇಮಸ್ ಆಗಿದ್ದ ಶಹಾಬಾದ. ಅಲ್ಲಿಗೆ ಸಿನಿಮಾ ನೋಡುದಕ್ಕೆ ಹೋಗ್ತಿದ್ವಿ. ನಾನು ` ಆವಾರಾ ', `420' ನೋಡಿದ್ದೆಲ್ಲಾ ಅಲ್ಲಿಯೇ. ಆಗೇ ನಾಕಾರು ಸರ

ಕೇವಲ ಕೌಶಲ್ಯ ಕಲೆಯಲ್ಲ; ಅನುಕರಣೆಯೂ ಕಲೆ ಅಲ್ಲ

ಇಮೇಜ್
ಗುಲ್ಬರ್ಗದ ಹಿರಿಯ ಕಲಾವಿದ ಜೆ.ಎಸ್‌. ಖಂಡೇರಾವ್‌ ಜಾಗತೀಕರಣದ ಹೊಸ ಗಾಳಿಯಿಂದಾಗಿ ಬದುಕಿಗಾಗಿ ಕಲೆಯನ್ನು ಆಶ್ರಯಿಸಿರುವ ಕಮರ್ಷಿಯಲ್‌ ಆರ್ಟಿಸ್ಟ್‌ಗಳಿಗೆ ಹೊಡೆತ ಬಿದ್ದಿದೆ, ಬೀಳುತ್ತಿದೆ. ಆನ್ವಯಿಕ ಕಲಾವಿದರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬದಲಾದ ಕಾಲಕ್ಕೆ ತಕ್ಕಂತೆ ಅವರು ವೇಗವಾಗಿ ಬದಲಾಗ ಬೇಕಾದ ಸ್ಥಿತಿ ಇದೆ. ಅವರಿಗೀಗ ಕಂಪ್ಯೂಟರ್ ಕಲಿಯುವುದು ಅನಿವಾರ್ಯವಾಗಿದೆ. ಎಷ್ಟೇ ಆಧುನಿಕ ಕಂಪ್ಯೂಟರ್ ಬಂದರೂ ಅದು ಕಲಾವಿದನ ಸ್ಥಾನ ಆಕ್ರಮಿಸುವುದಿಲ್ಲ. ಎರಡೂ ಬೇರೆ. ಕಲಾವಿದ ಕುಂಚದ ಬದಲಿಗೆ ಕಂಪ್ಯೂಟರ್ ಬಳಸಬಹುದು. ಅದರರ್ಥ ಬ್ರಷ್ ಬದಲಿಗೆ ಮೌಸ್ ಬರುತ್ತದೆ ಅಷ್ಟೇ. ಅದಕ್ಕೂ ಕಲಾವಿದನ ಚಿಂತನೆ ಮತ್ತು ಕೌಶಲ್ಯ ಬೇಕೇ ಬೇಕಾಗುತ್ತದೆ. ಆಧುನಿಕ ತಂತ್ರಜ್ಞಾನದ ಫಲವಾಗಿ ಬಂದಿರುವ ಡಿಜಿಟಲ್ ಪ್ರಿಂಟ್‌ಗಳಿಂದ ಓರಿಜಿನಲ್ ಆಗಿ ರಚಿಸಲಾಗುವ ಕಲಾಕೃತಿಗಳ ಮಹತ್ವ ಕಡಿಮೆ ಆಗುವ ಸಾಧ್ಯತೆಗಳೇ ಇಲ್ಲ. ತಂತ್ರಜ್ಞ ಮ್ಯಾಕ್ಸಿಮಮ್ ಕಷ್ಟಪಟ್ಟರೂ ಮೂಲ ಕಲಾಕೃತಿಯ ಅರ್ಧದಷ್ಟು ಗುಣಮಟ್ಟ ತರುವುದೂ ಸಾಧ್ಯವಿಲ್ಲ. ಕ್ಯಾನ್ವಾಸ್ ಮೇಲಿನ ಥಿಕ್‌ನೆಸ್ ಕುಂಚದ ಬೀಸುಗಳು ಪ್ರಿಂಟ್‌ನಲ್ಲಿ ಬರುವುದೇ ಇಲ್ಲ. ಕಾಲದ ಪರೀಕ್ಷೆಯಲ್ಲಿ ಓರಿಜಿನಲ್ ಕಲಾಕೃತಿಗಳು ಉಳಿದುಕೊಳ್ಳುತ್ತವೆ. ಪ್ರಿಂಟ್‌ಗಳಿಗೆ ಆ ಭಾಗ್ಯ ಇಲ್ಲ. *** ಕಲಾಸಕ್ತರು ಮತ್ತು ಕಲಾವಿದರು ಮುಖಾಮುಖಿ ಆಗುವುದಕ್ಕೆ ಗ್ಯಾಲರಿಗಳು ಅನಿವಾರ್ಯ. ಕಲಾವಿದರಿಗೂ ತಮ್ಮ ಕಲಾಕೃತಿಗಳು ಒಳ್ಳೆಯ ಬೆಲೆಗೆ ಮಾರಾಟ ಆಗಬೇಕು ಮತ

ಸಂಗೀತ ಕೇಳುಗರಿಗಾಗಿ; ಪ್ರಶಸ್ತಿಗಾಗಿ ಅಲ್ಲ

ಇಮೇಜ್
ತಮ್ಮ ನೇರ , ನಿಷ್ಠುರ ಮಾತುಗಳಿಂದ ಸಾಂಸ್ಕೃತಿಕ ವಲಯದ ನೈತಿಕ ಎಚ್ಚರವನ್ನು ಜಾಗೃತವಾಗಿಡುತ್ತಿದ್ದ ಉಸ್ತಾದ್ ವಿಲಾಯತ್ ಖಾನ್ ಹಿಂದೂಸ್ತಾನಿ ಸಂಗೀತ ಪರಂಪರೆಯಲ್ಲಿ ಮೂಡಿಬಂದ ಅಪರೂಪದ ನಕ್ಷತ್ರಗಳಲ್ಲಿ ಒಬ್ಬರು . `ಬೀನ್‌ಕಾರ್‍' ಶೈಲಿಯಲ್ಲಿ ಪ್ರಚಲಿತವಾಗಿದ್ದ ಸಿತಾರ ವಾದನ ಪರಂಪರೆಗೆ ` ಗಾಯಕಿ ಅಂಗ್ ' ಸೇರಿಸಿದ ಹಿರಿಮೆ ಇವರದು . ಸಿತಾರ್ ವಾದನದಲ್ಲಿ ಗಾಯನ ಶೈಲಿ ಅಳವಡಿಸಿ ಅದಕ್ಕೆ ಅಗತ್ಯವಾಗಿದ್ದ ಸಿತಾರನ್ನು ರೂಪಿಸಿಕೊಂಡವರು . ನಾಲ್ಕು ತಲೆಮಾರುಗಳ ಸಂಗೀತ ಪರಂಪರೆ ಇರುವ ಕುಟುಂಬದಲ್ಲಿ ಜನಿಸಿದ ವಿಲಾಯತ್ ತಂದೆ ಉಸ್ತಾದ್ ಇನಾಯತಖಾನ್ ರಲ್ಲಿ ಸಿತಾರ್ ವಾದನ ಕಲಿಯಲು ಆರಂಭಿಸಿದರು . ವಿಲಾಯತ್ ಬಾಲಕರಾಗಿದ್ದಾಗ ಒಮ್ಮೆ ಅವರ ತಂದೆ ಸಿತಾರ್ ವಾದನ ಪ್ರಸ್ತುತ ಪಡಿಸುತ್ತಿರುವಾಗ ` ಕಣ್ಮುಂದೆ ಹಳದಿ ಬಣ್ಣವೇ ಹರಡಿ ' ದಂತಾಗಿದ್ದನ್ನು ತಂದೆಗೆ ಹೇಳಿದರು . ಅದಕ್ಕೆ ಇನಾಯತಖಾನರು ` ಬುದ್ದು , ನಾನೀಗ ನುಡಿಸಿದ್ದ ` ಬಸಂತ್ ' ರಾಗ ' ಎಂದು ಹೇಳಿದ್ದರು . ಸಂಗೀತದಲ್ಲಿ ಬಣ್ಣದ ಛಾಯೆ ಕಂಡ ವಿಲಾಯತರಿಗೆ ತಂದೆಯಿಂದ ಹೆಚ್ಚಿನ ಸಿತಾರ್ ಶಿಕ್ಷಣ ದೊರೆಯಲಿಲ್ಲ . ಕೇವಲ ಹತ್ತು ವರ್ಷದವರಾಗಿದ್ದಾಗಲೇ ಪಿತೃವಿಯೋಗಕ್ಕೆ ಒಳಗಾಗಬೇಕಾಯಿತು . ವಿಧಿಯಾಟದಿಂದ ನೊಂದ ವಿಲಾಯತರಿಗೆ ಅಜ್ಜ ಉಸ್ತಾದ್ ಬಂದೆ ಹುಸೇನ್ ಖಾನ್ ( ತಾಯಿಯ ತಂದೆ ) ಮತ್

ಅಂಬಿಕಾತನಯದತ್ತ ಅಲ್ಲ; ಪತ್ರಕರ್ತ ಬೇಂದ್ರೆ

ಇಮೇಜ್
ಪಟ್ಟ ಪಾಡನ್ನೇ ಹಾಡಾಗಿಸಿ ' ಕಾವ್ಯೋದ್ಯೋಗ ' ಮಾಡಿದ ವರಕವಿ ದ . ರಾ . ಬೇಂದ್ರೆ ತುತ್ತಿನಚೀಲ ತುಂಬಿಸಿಕೊಳ್ಳುವುದಕ್ಕಾಗಿ - ಹವ್ಯಾಸಕ್ಕಾಗಿ ಪತ್ರಿಕೆಗಳನ್ನು ಆರಂಭಿಸಿ - ಸಂಪಾದಕರಾಗಿ ಪತ್ರಕರ್ತರಾಗಿ ಕೆಲಸ ಮಾಡಬೇಕಾಯಿತು . ಚಲನಶೀಲ ಪ್ರತಿಭೆ ತನ್ನತನ ಕಂಡುಕೊಳ್ಳಲು ಹಲವಾರು ಸಾಧ್ಯತೆಗಳನ್ನು ಪ್ರಯತ್ನಿಸುತ್ತಿರುತ್ತದೆ . ನೆಲೆ ಸಿಕ್ಕ ತಕ್ಷಣ ಅಲ್ಲಿ ತಳ ಊರುತ್ತದೆ . ಆದರೆ , ಬೇಂದ್ರೆಯವರು ಕಾವ್ಯಲೋಕದಲ್ಲಿ ಗತಿ ಸಿಕ್ಕ ಮೇಲೂ ` ಹೊಟ್ಟೆಪಾಡಿಗಾಗಿ ' ಸಾಹಿತ್ಯ ಪತ್ರಿಕೋದ್ಯಮವನ್ನು ಅವಲಂಬಿಸಿದ್ದರು ಎಂಬುದು ಕುತೂಹಲ ಹುಟ್ಟಿಸುವ ಸಂಗತಿ . ಕೈಬರಹದ ಪತ್ರಿಕೆಗಳಾದ ' ಕೊಳಲು ', ' ಗೆಳೆಯ ', ` ನಸುಕು ' ಮತ್ತು ಮುದ್ರಣ ಕಂಡ ' ಸ್ವಧರ್ಮ ' ವನ್ನು ಕಾವ್ಯಾಸಕ್ತಿ ಮತ್ತು ಹವ್ಯಾಸಕ್ಕಾಗಿ ಆರಂಭಿಸಿದ್ದ ಬೇಂದ್ರೆಯವರು ಮಾಸ್ತಿಯವರ ಸಹಾಯದಿಂದ ` ಜೀವನ ' ಮಾಸಪತ್ರಿಕೆಯನ್ನು ಸಂಪಾದಿಸಿ ಪ್ರಕಟಿಸಿದ್ದರು. '1940 ರ ವರೆಗೆ ಎಲ್ಲೂ ಕೆಲಸ ಸಿಕ್ಕದೆ ಅಣ್ಣ ಮಾಸ್ತಿಯವರ ವಾತ್ಸಲ್ಯದ ಬೆಂಬಲದಿಂದ ಜೀವನ ಸಂಪಾದಕನೆಂದು ಗೌರವದಿಂದ ಅಲೆದಾಡಿದೆ '' ಎಂದು ತಮ್ಮ ಆತ್ಮಕತೆ ` ಕಾವ್ಯೋದ್ಯೋಗ ' ದಲ್ಲಿ ಬೇಂದ್ರೆ ಬರೆದಿದ್ದಾರೆ. ಪತ್ರಿಕೆಗಳನ್ನು ನಡೆಸಿದ ಅವಧಿಯಲ್ಲಿ ಬೇಂದ್ರೆಯವರು ವೈವಿಧ್ಯಮ