ಹೆಸರಾಂತ ಸಂಗೀತಗಾರ ದೀನಾನಾಥ ಮಂಗೇಶ್ಕರ್ ಅವರ ಜನ್ಮಶತಮಾನೋತ್ಸವ (1990) ಸಮಾರಂಭ . ದೇಶದ ಗಣ್ಯ - ಮಾನ್ಯರೆಲ್ಲ ಭಾಗವಹಿಸಿದ್ದ ಬೃಹತ್ ವೇದಿಕೆಯಲ್ಲಿ ಚಟುವಟಿಕೆಗಳು ಚುರುಕಾಗಿ ನಡೆಯುತ್ತಿದ್ದವು . ಅದೇ ಹೊತ್ತಿಗೆ ಶ್ವೇತವರ್ಣದ ಗಡ್ಡಧಾರಿಯೊಬ್ಬರು ಸಭಾಂಗಣ ಪ್ರವೇಶಿಸಿದರು . ಅವರನ್ನು ನೋಡಿದ ದೀನಾನಾಥ ಅವರ ಪುತ್ರಿ ಲತಾ ಮಂಗೇಶ್ಕರ್ ಅವರು ವೇದಿಕೆಯಿಂದ ಕೆಳಗಿಳಿದು ಬಂದು ಹಿರಿಯರ ಕಾಲುಮುಟ್ಟಿ ನಮಸ್ಕರಿಸಿದರು . ಅವರನ್ನು ಮುಂದಿನ ಸಾಲಿನಲ್ಲಿ ಕೂಡಿಸಿ ವೇದಿಕೆಗೆ ಮರಳಿದರು . ನೀಳವಾದ ಬಿಳಿಗಡ್ಡ ಹಣೆಯಲ್ಲಿ ಕಾಸಗಲದ ಕುಂಕುಮ ಹಚ್ಚಿಕೊಂಡಿದ್ದ ವ್ಯಕ್ತಿಯು ಯಾರೋ ಸ್ವಾಮೀಜಿ ಅಥವಾ ಆಚಾರ್ಯರು ಇರಬಹುದು ಎಂದು ಬಹುತೇಕರು ಭಾವಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯ ಸ್ವಲ್ಪ ಸಮಯದ ನಂತರ ಲತಾ ಮತ್ತೊಮ್ಮೆ ಸ್ವತಃ ಕೆಳಗಿಳಿದು ಬಂದು ವಿನಮ್ರತೆಯಿಂದ ವೇದಿಕೆಯ ಮೇಲೆ ಬರುವಂತೆ ಆಹ್ವಾನಿಸಿದರು . ವೇದಿಕೆ ಹತ್ತಿದ ನಂತರ ಮೈಕ್ ಹತ್ತಿರ ಬಂದ ಲತಾ ಅವರು ’ ತಂದೆಯು ಸದಾಕಾಲ ನನ್ನ ಜತೆ ಇರುವಂತೆ ಮಾಡಿದ ಕಲಾವಿದ ಎಸ್ . ಎಂ . ಪಂಡಿತ್ ( ಸಾಂಬಾನಂದ ಮೋನಪ್ಪ ಪಂಡಿತ್ ). ಅವರ ಕಲಾಕೃತಿಯಿಂದಾಗಿ ಪ್ರತಿದಿನವೂ ನನ್ನ ತಂದೆಯ ಜತೆ ಸಂವಾದ ನಡೆಸುವುದು ಸಾಧ್ಯವಾಗಿದೆ ’ ಎಂದು ಹೇಳುತ್ತಿದ್ದಂತೆ ಭಾರೀ ಕರತಾಡನದ ಪ್ರತಿಕ್ರಿಯೆ . ಸಂಗೀ...
ಶ್ರೀದೇವಿ ಪುರಾಣದ ಕರ್ತೃ ಚಿದಾನಂದ ಅವಧೂತರ ಉಪಾಸನಾ ದೈವ ’ಅಂಬಾ’ಮಾತೆಯ ವಿಗ್ರಹಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಗಡ್ಡದ ಅವರ ಮನೆಯಲ್ಲಿ ನಿತ್ಯಪೂಜೆ ನಡೆಯುತ್ತಿದೆ. ನವರಾತ್ರಿಯ ಈ ದಿನಗಳಲ್ಲಿ ಅಲ್ಲಿ ವಿಶೇಷ ಪೂಜೆ- ಅರ್ಚನೆಗಳು ಶ್ರದ್ಧೆ- ಭಕ್ತಿಯಿಂದ ನಡೆಯುತ್ತಿವೆ. ಸುರಪುರ ಪಟ್ಟಣದ ಮುಜಂದಾರ ಗಲ್ಲಿಯ ಪಾಂಡುರಂಗ ದೇವಸ್ಥಾನದ ಹಿಂಬದಿಯಲ್ಲಿ ಇರುವ ವೆಂಕಣ್ಣಭಟ್ ಗಡ್ಡದ ಅವರ ಮನೆಯಲ್ಲಿ ಚಿದಾನಂದ ಅವಧೂತರು ಪೂಜಿಸುತ್ತಿದ್ದ ಉಪಾಸನಾ ಮೂರ್ತಿ ಇದೆ. ನಿತ್ಯಪೂಜೆ ಸಲ್ಲುವ ಶ್ರೀಚಕ್ರ ಸಮೇತ ಇರುವ ದೇವಿಯ ಪ್ರತಿಮೆಯು ಸುಮಾರು ೧೨ ಇಂಚು ಎತ್ತರದ್ದಾಗಿದೆ. ಪಾಶ ಅಂಕುಶ, ಬಿಲ್ಲುಬಾಣಗಳನ್ನು ಕೈಯಲ್ಲಿ ಹಿಡಿದಿರುವ ಚತುರ್ಭುಜೆ ದೇವಿಯ ಪ್ರತಿಮೆಗೆ ಕೇವಲ ಧಾರ್ಮಿಕ ಕಾರಣಗಳಿಗಾಗಿ ಮುಖ್ಯ ಅಲ್ಲ. ಇದೊಂದು ಐತಿಹಾಸಿಕ, ಸಾಂಸ್ಕೃತಿಕ ಮಹತ್ವ ಇರುವಂತಹದ್ದು. ಆಸ್ಥೆ ಮತ್ತು ಶ್ರದ್ಧೆಯ ಕಾರಣಗಳಿಂದ ಮೂರ್ತಿಯನ್ನು ಸಮೀಪದಿಂದ ನೋಡಲು ಸಾಧ್ಯವಿಲ್ಲದಿದ್ದರೂ ಪೂಜಾಲಂಕೃತ ವಿಗ್ರಹವನ್ನು ನೋಡುವುದೇ ಒಂದು ಸೊಬಗು. ಚಿದಾನಂದ ಅವಧೂತರೇ ಸ್ವತಃ ಪೂಜಿಸುತ್ತಿದ್ದ ಈ ವಿಗ್ರಹ ಅವರ ಕಾಲಾನಂತರ ಗಡ್ಡದ ಮನೆ ಸೇರಿಕೊಂಡಿತು. ಸದ್ಯ ಸುರಪುರ ನಿವಾಸಿಗಳಾಗಿರುವ ಕನಕಗಿರಿ ಮೂಲದ ಗಡ್ಡದ ಮನೆತನದ ಹಿರಿಯರಿಗೆ ಈ ಪ್ರತಿಮೆಯನ್ನು ಸ್ವತಃ ಅವಧೂತರೇ ತಮ್ಮ ಕೊನೆಯ ದಿನಗಳಲ್ಲಿ ನಿತ್ಯಪೂಜೆ ನಡೆಸುವಂತೆ ಸೂಚಿಸಿ ಹಸ್ತಾಂತರ ಮಾಡಿದರು ಎಂಬ ಐತಿಹ್ಯ ಇದೆ. ವೆಂಕಣ್ಣಭಟ್ಟರು ಈ ಐ...
ತಮ್ಮ ಕಲಾಕೃತಿಗಳಲ್ಲಿ ಹೈದರಾಬಾದ್ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಕಲ್ಬುರ್ಗಿ ಸುತ್ತಲಿನ ಬದುಕಿನ ಅನುಭವ- ಜೀವಂತಿಕೆಯನ್ನು ಚಿತ್ರಿಸುವ ವಿ.ಜಿ. ಅಂದಾನಿಯವರು ಪ್ರಾದೇಶಿಕ ಅನನ್ಯ ಶೈಲಿಯ ಮೂಲಕ ಹೆಸರುವಾಸಿಯಾಗಿರುವವರು. ಕಲ್ಬುರ್ಗಿಯಂತಹ ಬರಡು ನೆಲದಲ್ಲಿ ` ಐಡಿಯಲ್ ಫೈನ್ ಆರ್ಟ್ ಸ್ಕೂಲ್ ' ಮೂಲಕ ಕಲಾಪರಂಪರೆಯನ್ನು ಹುಟ್ಟುಹಾಕಿರುವ ಅಂದಾನಿಯವರು ತಮ್ಮ ಕುಟುಂಬ , ನೆನಪು- ಹಳಹಳಿಕೆ- ಕನಸುಗಳನ್ನು ಮನಬಿಚ್ಚಿ ಮಾತನಾಡುತ್ತಾರೆ. ` ನಮ್ಮೂರು ಕಲ್ಬುರ್ಗಿಗೆ 25 ಕಿ.ಮೀ. ದೂರದಲ್ಲಿರುವ ಕಿರಣಗಿ. ನಾ ಸಣ್ಣಾವ್ದಿದಾಗ ನಮ್ಮದು ಜಾಯಿಂಟ್ ಫ್ಯಾಮಿಲಿ. ಒಬ್ಬ ಅಕ್ಕ ಸೇರಿದಂತೆ 11 ಸಹೋದರರಲ್ಲಿ ನಾನೇ ಕಡೆಯವ. ನಿಜಾಂ ಕಾಲದಲ್ಲಿ ಪಟವಾರಿ ಆಗಿದ್ದ ಅಜ್ಜ ಭಾರೀ ಮನಸ್ಯಾ ಇದ್ದ . ಅವನಿಂದಾನೇ ಮನ್ಯಾಗ ಎಲ್ಲರಿಗಿ ಎಜ್ಯುಕೇಷನ್ ಸಿಕ್ಕಿದ್ದು. ಆದ್ರ ನಮ್ಮ ಫಾದರ್ ಮಾತ್ರ ಪೂರ್ತಿ ಹೊಲಾನೇ ನಂಬಿ ಬದುಕಿದ್ದವರು. ನನಗೂ ಒಕ್ಕಲತನದ ಮ್ಯಾಲ ಭಾಳ ಒಲವ ಐತಿ. ಈಗೀಗ ಕಲ್ಬುರ್ಗಿ ಊರ ಹೊರಗ ಒಂದೀಟು ಹೊಲ ತಗೊಂಡು ತೋಟ-ಪಟ್ಟಿ ತರಹ ಮಾಡಬೇಕು ಅಂತ ಅಂದುಕೊಂಡೀನಿ ' ಎಂದು ತಮ್ಮ ಹಿನ್ನೆಲೆ ಮತ್ತು ` ಕನಸು ' ವಿವರಿಸುತ್ತಾರೆ. ` ನಮ್ಮೂರಿಗೆ ಸನೀಪದ ದೊಡ್ಡ ಊರಂದ್ರ ಎಸಿಸಿ ಫ್ಯಾಕ್ಟರಿಯಿಂದ ಫೇಮಸ್ ಆಗಿದ್ದ ಶಹಾಬಾದ. ಅಲ್ಲಿಗೆ ಸಿನಿಮಾ ನೋಡುದಕ್ಕೆ ಹೋಗ್ತಿದ್ವಿ. ನಾನು ` ಆವಾರಾ ', `420' ನೋಡಿದ್ದೆಲ್ಲಾ ಅಲ್ಲಿಯೇ. ಆಗೇ ನಾಕಾರು ಸರ...
ಕಾಮೆಂಟ್ಗಳು