ತಮ್ಮ ನೇರ , ನಿಷ್ಠುರ ಮಾತುಗಳಿಂದ ಸಾಂಸ್ಕೃತಿಕ ವಲಯದ ನೈತಿಕ ಎಚ್ಚರವನ್ನು ಜಾಗೃತವಾಗಿಡುತ್ತಿದ್ದ ಉಸ್ತಾದ್ ವಿಲಾಯತ್ ಖಾನ್ ಹಿಂದೂಸ್ತಾನಿ ಸಂಗೀತ ಪರಂಪರೆಯಲ್ಲಿ ಮೂಡಿಬಂದ ಅಪರೂಪದ ನಕ್ಷತ್ರಗಳಲ್ಲಿ ಒಬ್ಬರು . `ಬೀನ್ಕಾರ್' ಶೈಲಿಯಲ್ಲಿ ಪ್ರಚಲಿತವಾಗಿದ್ದ ಸಿತಾರ ವಾದನ ಪರಂಪರೆಗೆ ` ಗಾಯಕಿ ಅಂಗ್ ' ಸೇರಿಸಿದ ಹಿರಿಮೆ ಇವರದು . ಸಿತಾರ್ ವಾದನದಲ್ಲಿ ಗಾಯನ ಶೈಲಿ ಅಳವಡಿಸಿ ಅದಕ್ಕೆ ಅಗತ್ಯವಾಗಿದ್ದ ಸಿತಾರನ್ನು ರೂಪಿಸಿಕೊಂಡವರು . ನಾಲ್ಕು ತಲೆಮಾರುಗಳ ಸಂಗೀತ ಪರಂಪರೆ ಇರುವ ಕುಟುಂಬದಲ್ಲಿ ಜನಿಸಿದ ವಿಲಾಯತ್ ತಂದೆ ಉಸ್ತಾದ್ ಇನಾಯತಖಾನ್ ರಲ್ಲಿ ಸಿತಾರ್ ವಾದನ ಕಲಿಯಲು ಆರಂಭಿಸಿದರು . ವಿಲಾಯತ್ ಬಾಲಕರಾಗಿದ್ದಾಗ ಒಮ್ಮೆ ಅವರ ತಂದೆ ಸಿತಾರ್ ವಾದನ ಪ್ರಸ್ತುತ ಪಡಿಸುತ್ತಿರುವಾಗ ` ಕಣ್ಮುಂದೆ ಹಳದಿ ಬಣ್ಣವೇ ಹರಡಿ ' ದಂತಾಗಿದ್ದನ್ನು ತಂದೆಗೆ ಹೇಳಿದರು . ಅದಕ್ಕೆ ಇನಾಯತಖಾನರು ` ಬುದ್ದು , ನಾನೀಗ ನುಡಿಸಿದ್ದ ` ಬಸಂತ್ ' ರಾಗ ' ಎಂದು ಹೇಳಿದ್ದರು . ಸಂಗೀತದಲ್ಲಿ ಬಣ್ಣದ ಛಾಯೆ ಕಂಡ ವಿಲಾಯತರಿಗೆ ತಂದೆಯಿಂದ ಹೆಚ್ಚಿನ ಸಿತಾರ್ ಶಿಕ್ಷಣ ದೊರೆಯಲಿಲ್ಲ . ಕೇವಲ ಹತ್ತು ವರ್ಷದವರಾಗಿದ್ದಾಗಲೇ ಪಿತೃವಿಯೋಗಕ್ಕೆ ಒಳಗಾಗಬೇಕಾಯಿತು . ವಿಧಿಯಾಟದಿಂದ ನೊಂದ ವಿಲಾಯತರಿಗೆ ಅಜ್ಜ ಉಸ್ತಾದ್ ಬಂದೆ ಹುಸೇನ್ ಖಾನ್ ( ತಾಯಿಯ ತಂದೆ ) ಮತ್...
ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಮಾಧ್ಯಮಗಳು ಮತ್ತು ರಾಜಕೀಯ ವಿಶ್ಲೇಷಕರು 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಬಿಂಬಿಸಿವೆ. ಮೇಲ್ನೋಟಕ್ಕೆ ಅದು ಸರಿ ಎಂದು ಕೂಡ ಅನ್ನಿಸುತ್ತಿತ್ತು. ಅನ್ನಿಸುತ್ತಿದೆ. ರಾಜಕಾರಣದಲ್ಲಿ ಕಂಡದ್ದು, ಕೇಳಿದ್ದು ಮಾತ್ರ ‘ಸತ್ಯ’ ಅಲ್ಲ. ಹಾಗಾದರೆ ಕರ್ನಾಟಕದ ಚುನಾವಣೆಯು ಸೆಮಿಫೈನಲ್ ಅಲ್ಲವೇ? ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆಟದ ನಿಯಮಗಳು ರಾಜಕೀಯಕ್ಕೆ ಅನ್ವಯಿಸುವುದಿಲ್ಲ. ಜನ ರಾಜಕೀಯ ಆಯ್ಕೆಯನ್ನು ಆಟದ ರೀತಿಯಲ್ಲಿ ಮನರಂಜನೆ ಎಂದು ಭಾವಿಸುವುದಿಲ್ಲ. ಯಾಕೆಂದರೆ ಅವರಿಗೆ ತಮ್ಮ ಆಯ್ಕೆ ಉಂಟು ಮಾಡುವ ಅಪಾಯದ ಅರಿವು –ಮುನ್ಸೂಚನೆ ಇದ್ದೇ ಇರುತ್ತದೆ. ಎರಡು ಚುನಾವಣೆಯ ನಡುವಿನ ಅವಧಿಯಲ್ಲಿ ‘ಮತದಾರ ಪ್ರಭು’ ಅಸಹಾಯಕ. ಅದು ಅವನಿಗೆ ಗೊತ್ತಿರದ ಸಂಗತಿಯೇನಲ್ಲ. ಸಣ್ಣಪುಟ್ಟ ಬದಲಾವಣೆ- ಘಟನೆ-ಬೆಳವಣಿಗೆಗಳೂ ಸಂಕೇತ-ಸೂಚನೆ ನೀಡುತ್ತವೆ ಎನ್ನುವುದು ಒಂದು ಹಂತದ ಮಟ್ಟಿಗಿನ ತರ್ಕಕ್ಕೆ ಸರಿ. ತರ್ಕವು ಸತ್ಯದ ಸಮೀಪ ಹೋಗಬಹುದಾದ ದಾರಿ ಮಾತ್ರ. ತರ್ಕದಿಂದಲೇ ಸತ್ಯವನ್ನು ಅರಿಯಲು-ಪಡೆಯಲು ಸಾಧ್ಯವಿಲ್ಲ. ಹಾಗಾದರೆ ಅದು ಹೇಗೆ ಸಿಗುತ್ತದೆ? ಅದನ್ನು ಪಡೆಯುವ ಕ್ರಮ ಏನು? ಅದು ವರ್ತಮಾನವನ್ನು ಹಿಡಿಯುವ ಹಂಬಲದ ಹಾಗೆ. ಸಿಕ್ಕಿತು ಎಂದು ಅನ್ನಿಸುವ ವೇಳೆಗಾಗಲೇ ಅದು ಬದಲಾಗಿ ಬಿಟ್ಟಿರುತ್ತದೆ. ಅದಿರಲಿ. ಒಮ್ಮೆ ಓಟು ಕೊಟ್ಟ ಮೇಲೆ ಮತದಾರ ಮೂಕ ಪ್ರೇಕ್ಷಕ ಆಗುತ್ತಾನೆ. ಐದು ವರ್ಷದ ವರೆಗೆ ಬರಿ ನೋಡುವುದಷ್ಟೇ ಅ...
ಹೆಸರಾಂತ ಸಂಗೀತಗಾರ ದೀನಾನಾಥ ಮಂಗೇಶ್ಕರ್ ಅವರ ಜನ್ಮಶತಮಾನೋತ್ಸವ (1990) ಸಮಾರಂಭ . ದೇಶದ ಗಣ್ಯ - ಮಾನ್ಯರೆಲ್ಲ ಭಾಗವಹಿಸಿದ್ದ ಬೃಹತ್ ವೇದಿಕೆಯಲ್ಲಿ ಚಟುವಟಿಕೆಗಳು ಚುರುಕಾಗಿ ನಡೆಯುತ್ತಿದ್ದವು . ಅದೇ ಹೊತ್ತಿಗೆ ಶ್ವೇತವರ್ಣದ ಗಡ್ಡಧಾರಿಯೊಬ್ಬರು ಸಭಾಂಗಣ ಪ್ರವೇಶಿಸಿದರು . ಅವರನ್ನು ನೋಡಿದ ದೀನಾನಾಥ ಅವರ ಪುತ್ರಿ ಲತಾ ಮಂಗೇಶ್ಕರ್ ಅವರು ವೇದಿಕೆಯಿಂದ ಕೆಳಗಿಳಿದು ಬಂದು ಹಿರಿಯರ ಕಾಲುಮುಟ್ಟಿ ನಮಸ್ಕರಿಸಿದರು . ಅವರನ್ನು ಮುಂದಿನ ಸಾಲಿನಲ್ಲಿ ಕೂಡಿಸಿ ವೇದಿಕೆಗೆ ಮರಳಿದರು . ನೀಳವಾದ ಬಿಳಿಗಡ್ಡ ಹಣೆಯಲ್ಲಿ ಕಾಸಗಲದ ಕುಂಕುಮ ಹಚ್ಚಿಕೊಂಡಿದ್ದ ವ್ಯಕ್ತಿಯು ಯಾರೋ ಸ್ವಾಮೀಜಿ ಅಥವಾ ಆಚಾರ್ಯರು ಇರಬಹುದು ಎಂದು ಬಹುತೇಕರು ಭಾವಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯ ಸ್ವಲ್ಪ ಸಮಯದ ನಂತರ ಲತಾ ಮತ್ತೊಮ್ಮೆ ಸ್ವತಃ ಕೆಳಗಿಳಿದು ಬಂದು ವಿನಮ್ರತೆಯಿಂದ ವೇದಿಕೆಯ ಮೇಲೆ ಬರುವಂತೆ ಆಹ್ವಾನಿಸಿದರು . ವೇದಿಕೆ ಹತ್ತಿದ ನಂತರ ಮೈಕ್ ಹತ್ತಿರ ಬಂದ ಲತಾ ಅವರು ’ ತಂದೆಯು ಸದಾಕಾಲ ನನ್ನ ಜತೆ ಇರುವಂತೆ ಮಾಡಿದ ಕಲಾವಿದ ಎಸ್ . ಎಂ . ಪಂಡಿತ್ ( ಸಾಂಬಾನಂದ ಮೋನಪ್ಪ ಪಂಡಿತ್ ). ಅವರ ಕಲಾಕೃತಿಯಿಂದಾಗಿ ಪ್ರತಿದಿನವೂ ನನ್ನ ತಂದೆಯ ಜತೆ ಸಂವಾದ ನಡೆಸುವುದು ಸಾಧ್ಯವಾಗಿದೆ ’ ಎಂದು ಹೇಳುತ್ತಿದ್ದಂತೆ ಭಾರೀ ಕರತಾಡನದ ಪ್ರತಿಕ್ರಿಯೆ . ಸಂಗೀ...
ಕಾಮೆಂಟ್ಗಳು