ಕನ್ನಡ ಮಾತನಾಡುವ ಪ್ರದೇಶಗಳು ಒಂದೇ ಆಡಳಿತ ವ್ಯಾಪ್ತಿಗೆ ಸೇರುವುದಕ್ಕಾಗಿ ಹೋರಾಟವೂ ಸೇರಿದಂತೆ ನಡೆದ ಸಭೆ- ಸಮಾರಂಭ ಹಾಗೂ ವಾಗ್ವಾದ, ಚರ್ಚೆ ಮುಂತಾದ ಚಟುವಟಿಕೆಗಳನ್ನು ‘ಏಕೀಕರಣ ಚಳುವಳಿ’ ಎಂದು ಕರೆಯಲಾಗುತ್ತದೆ. ಅಂದರೆ ಹಿಂದೆ ಕನ್ನಡ ಮಾತನಾಡುವ ಜನ ಒಂದೇ ಆಡಳಿತಕ್ಕೆ ಒಳಪಟ್ಟಿರಲಿಲ್ಲವೇ? ಎಂಬ ಪ್ರಶ್ನೆ ಮೂಡುವುದು ಸಹಜ. ಹೌದು ಕನ್ನಡ ಭಾಷೆ ಮಾತನಾಡುವ ಜನ ಹತ್ತು ಹಲವು ಆಡಳಿತ ಪ್ರದೇಶಗಳಲ್ಲಿ ಹರಿದು ಹಂಚಿಹೋಗಿದ್ದರು. ಆಡಳಿತ ನಡೆಸುವುದಕ್ಕೆ ಸಂಬಂಧಿಸಿದಂತೆ ಒಂದು ಭಾಷೆಯನ್ನು ಮಾತನಾಡುವ ಜನ ಒಂದೇ ಪ್ರದೇಶದ ವ್ಯಾಪ್ತಿಗೆ ಸೇರಬೇಕು ಎಂಬ ಪರಿಕಲ್ಪನೆಯೇ ಇರಲಿಲ್ಲ. ಏಕೀಕರಣ ಚಳುವಳಿಯು ಯಾಕೆ? ಮತ್ತು ಹೇಗೆ? ಹುಟ್ಟಿಕೊಂಡಿತು. ಅದು ಬೆಳೆದು ಬಂದ ರೀತಿಯನ್ನು ಸ್ಥೂಲವಾಗಿ ಅರಿತು ಕೊಂಡರೆ ಕನ್ನಡ ಭಾಷಿಕರೂ ಸೇರಿದಂತೆ ಹಲವು ಭಾರತೀಯ ಭಾಷೆಗಳ ಪ್ರತ್ಯೇಕ ಪ್ರಾಂತ್ಯಗಳು ಅಥವಾ ರಾಜ್ಯಗಳು ರೂಪುಗೊಂಡ ಕಥೆಯು ಅರಿವಿಗೆ ಬರುತ್ತದೆ. 1947ರ ಆಗಸ್ಟ್ 15ರಂದು ಭಾರತವು ಬ್ರಿಟಿಷ್ ಆಡಳಿತದಿಂದ ಮುಕ್ತಗೊಂಡಿತು. ಸತತ ಮತ್ತು ಸುದೀರ್ಘ ಹೋರಾಟದ ಫಲವಾಗಿ ಸ್ವಾತಂತ್ರ್ಯವೇನೋ ದೊರೆಯಿತು. ಆದರೆ, ಧರ್ಮದ ಹೆಸರಿನಲ್ಲಿ ಭಾರತವು ಎರಡು ದೇಶಗಳಾಗಿ ವಿಭಜನೆಗೊಂಡಿತು. ಪಾಕಿಸ್ತಾನ- ಭಾರತಗಳೆರಡೂ ಪ್ರತ್ಯೇಕ ದೇಶಗಳಾಗಿ ಬ್ರಿಟಿಷ್ ಆಡಳಿತದಿಂದ ಸ್ವತಂತ್ರಗೊಂಡವು. ಬ್ರಿಟಿಷ್ ಆಡಳಿತ ನಡೆಯುತ್ತಿದ್ದ ಸಂದರ್ಭದಲ್ಲಿ ಭಾರತದಾದ್ಯಂತ ಏಕರೂಪಿಯಾದ ಆಡಳಿತ ವ್ಯವಸ್ಥೆ ಇರಲ
ಶ್ರೀದೇವಿ ಪುರಾಣದ ಕರ್ತೃ ಚಿದಾನಂದ ಅವಧೂತರ ಉಪಾಸನಾ ದೈವ ’ಅಂಬಾ’ಮಾತೆಯ ವಿಗ್ರಹಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಗಡ್ಡದ ಅವರ ಮನೆಯಲ್ಲಿ ನಿತ್ಯಪೂಜೆ ನಡೆಯುತ್ತಿದೆ. ನವರಾತ್ರಿಯ ಈ ದಿನಗಳಲ್ಲಿ ಅಲ್ಲಿ ವಿಶೇಷ ಪೂಜೆ- ಅರ್ಚನೆಗಳು ಶ್ರದ್ಧೆ- ಭಕ್ತಿಯಿಂದ ನಡೆಯುತ್ತಿವೆ. ಸುರಪುರ ಪಟ್ಟಣದ ಮುಜಂದಾರ ಗಲ್ಲಿಯ ಪಾಂಡುರಂಗ ದೇವಸ್ಥಾನದ ಹಿಂಬದಿಯಲ್ಲಿ ಇರುವ ವೆಂಕಣ್ಣಭಟ್ ಗಡ್ಡದ ಅವರ ಮನೆಯಲ್ಲಿ ಚಿದಾನಂದ ಅವಧೂತರು ಪೂಜಿಸುತ್ತಿದ್ದ ಉಪಾಸನಾ ಮೂರ್ತಿ ಇದೆ. ನಿತ್ಯಪೂಜೆ ಸಲ್ಲುವ ಶ್ರೀಚಕ್ರ ಸಮೇತ ಇರುವ ದೇವಿಯ ಪ್ರತಿಮೆಯು ಸುಮಾರು ೧೨ ಇಂಚು ಎತ್ತರದ್ದಾಗಿದೆ. ಪಾಶ ಅಂಕುಶ, ಬಿಲ್ಲುಬಾಣಗಳನ್ನು ಕೈಯಲ್ಲಿ ಹಿಡಿದಿರುವ ಚತುರ್ಭುಜೆ ದೇವಿಯ ಪ್ರತಿಮೆಗೆ ಕೇವಲ ಧಾರ್ಮಿಕ ಕಾರಣಗಳಿಗಾಗಿ ಮುಖ್ಯ ಅಲ್ಲ. ಇದೊಂದು ಐತಿಹಾಸಿಕ, ಸಾಂಸ್ಕೃತಿಕ ಮಹತ್ವ ಇರುವಂತಹದ್ದು. ಆಸ್ಥೆ ಮತ್ತು ಶ್ರದ್ಧೆಯ ಕಾರಣಗಳಿಂದ ಮೂರ್ತಿಯನ್ನು ಸಮೀಪದಿಂದ ನೋಡಲು ಸಾಧ್ಯವಿಲ್ಲದಿದ್ದರೂ ಪೂಜಾಲಂಕೃತ ವಿಗ್ರಹವನ್ನು ನೋಡುವುದೇ ಒಂದು ಸೊಬಗು. ಚಿದಾನಂದ ಅವಧೂತರೇ ಸ್ವತಃ ಪೂಜಿಸುತ್ತಿದ್ದ ಈ ವಿಗ್ರಹ ಅವರ ಕಾಲಾನಂತರ ಗಡ್ಡದ ಮನೆ ಸೇರಿಕೊಂಡಿತು. ಸದ್ಯ ಸುರಪುರ ನಿವಾಸಿಗಳಾಗಿರುವ ಕನಕಗಿರಿ ಮೂಲದ ಗಡ್ಡದ ಮನೆತನದ ಹಿರಿಯರಿಗೆ ಈ ಪ್ರತಿಮೆಯನ್ನು ಸ್ವತಃ ಅವಧೂತರೇ ತಮ್ಮ ಕೊನೆಯ ದಿನಗಳಲ್ಲಿ ನಿತ್ಯಪೂಜೆ ನಡೆಸುವಂತೆ ಸೂಚಿಸಿ ಹಸ್ತಾಂತರ ಮಾಡಿದರು ಎಂಬ ಐತಿಹ್ಯ ಇದೆ. ವೆಂಕಣ್ಣಭಟ್ಟರು ಈ ಐ
ಬರವಣಿಗೆ ಮಾತ್ರವಲ್ಲದೆ ಓದು ಅದರಲ್ಲೂ ವಿಶೇಷವಾಗಿ ’ಸಾಹಿತ್ಯದ ಓದು’ ಕೂಡ ಅಭಿವ್ಯಕ್ತಿಯ ಮಾಧ್ಯಮ ಎಂದು ಖಚಿತವಾಗಿ ನಂಬಿದವ, ನಂಬುವವ ನಾನು. ಕಳೆದ ಎರಡು ದಶಕಗಳ ಅವಧಿಯಲ್ಲಿ ಓದುಗನಾಗಿ ಸಾಹಿತ್ಯಲೋಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕುತೂಹಲ - ಆಸಕ್ತಿಯಿಂದ ಗಮನಿಸುತ್ತ ಬಂದಿದ್ದೇನೆ. ಹಲವು ಸಲ ಹೊರಗಿನವನಾಗಿ ಕೆಲವೊಮ್ಮೆ ’ಒಳಗಿನವ’ನಾಗಿ ಯೋಚಿಸಿ, ವರ್ತಿಸಿದ್ದೇನೆ. ಹೀಗಾಗಿ ಸಾಹಿತ್ಯದ ಜೊತೆಗೆ ನಿರ್ಧಿಷ್ಟವಾದ ಮತ್ತು ಹದವಾದ ’ಮಾನಸಿಕ ದೂರ’ ಇಟ್ಟುಕೊಳ್ಳುವುದು ಸಾಧ್ಯವಾಗಿದೆ. ಬರಹಗಾರನಾಗಿ ನನಗೆ ಇರುವ ಅನುಭವ ಸೀಮಿತವಾದದ್ದು. ಮೊದಲೇ ಹೇಳಿದ ಹಾಗೆ ನನಗೆ ಓದುವುದೇ ಅಭಿವ್ಯಕ್ತಿ ಎಂದು ನಂಬಿದ್ದರಿಂದ ಓದುವ ಖುಷಿಯನ್ನೇ ಬೆಳೆಸಿಕೊಳ್ಳುತ್ತ ಹೋದೆ. ಬರೆಯುವುದಕ್ಕಿಂತ ಓದುಗನಾಗುವುದೇ ನನ್ನ ಆಸಕ್ತಿ ಮತ್ತು ಗುರಿಯಾಗಿತ್ತು. ಹಾಗೆ ನೋಡಿದರೆ ನನ್ನ ಮತ್ತು ನನ್ನಂತಹ ಹಲವರ ಸಾಹಿತ್ಯದ ಆಸಕ್ತಿ ಬೆಳೆಯಲು ಆರಂಭವಾದದ್ದು ಭಾನುವಾರದ ಸಾಪ್ತಾಹಿಕ ಮತ್ತು ವಾರಪತ್ರಿಕೆಗಳ ಮೂಲಕ, ಕಳೆದ ಒಂದು ದಶಕದ ಅವಧಿಯಲ್ಲಿ ಸಾಹಿತ್ಯ ಪತ್ರಿಕೆಗಳ ಜೊತೆಗಿನ ಒಡನಾಟ ಮತ್ತು ಪ್ರಮುಖ ದೈನಿಕದಲ್ಲಿ ಅದರಲ್ಲೂ ವಿಶೇಷವಾಗಿ ಸಾಪ್ತಾಹಿಕ ವಿಭಾಗದಲ್ಲಿ ಕೆಲಸ ಮಾಡಿದ ಅನುಭವದ ಹಿನ್ನೆಲೆಯಲ್ಲಿ ಕೆಲವು ವಿಷಯಗಳನ್ನು ಇಲ್ಲಿ ಪ್ರಸ್ತಾಪಿಸಬಯಸುತ್ತೇನೆ. ’ಸಾಹಿತ್ಯ ಸೃಷ್ಟಿ ಮತ್ತು ಮಾಧ್ಯಮಗಳು’ ಎಂಬ ಶೀರ್ಷಿಕೆಯ ಅಡಿಯಲ್ಲಿ ಚರ್ಚೆ ನಡೆಸುವುದಕ್ಕಾಗಿ ಇಲ್ಲಿ ನಿಂತಿದ್ದೇನ
ಕಾಮೆಂಟ್ಗಳು