ಶ್ರೀದೇವಿ ಪುರಾಣದ ಕರ್ತೃ ಚಿದಾನಂದ ಅವಧೂತರ ಉಪಾಸನಾ ದೈವ ’ಅಂಬಾ’ಮಾತೆಯ ವಿಗ್ರಹಕ್ಕೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ಗಡ್ಡದ ಅವರ ಮನೆಯಲ್ಲಿ ನಿತ್ಯಪೂಜೆ ನಡೆಯುತ್ತಿದೆ. ನವರಾತ್ರಿಯ ಈ ದಿನಗಳಲ್ಲಿ ಅಲ್ಲಿ ವಿಶೇಷ ಪೂಜೆ- ಅರ್ಚನೆಗಳು ಶ್ರದ್ಧೆ- ಭಕ್ತಿಯಿಂದ ನಡೆಯುತ್ತಿವೆ. ಸುರಪುರ ಪಟ್ಟಣದ ಮುಜಂದಾರ ಗಲ್ಲಿಯ ಪಾಂಡುರಂಗ ದೇವಸ್ಥಾನದ ಹಿಂಬದಿಯಲ್ಲಿ ಇರುವ ವೆಂಕಣ್ಣಭಟ್ ಗಡ್ಡದ ಅವರ ಮನೆಯಲ್ಲಿ ಚಿದಾನಂದ ಅವಧೂತರು ಪೂಜಿಸುತ್ತಿದ್ದ ಉಪಾಸನಾ ಮೂರ್ತಿ ಇದೆ. ನಿತ್ಯಪೂಜೆ ಸಲ್ಲುವ ಶ್ರೀಚಕ್ರ ಸಮೇತ ಇರುವ ದೇವಿಯ ಪ್ರತಿಮೆಯು ಸುಮಾರು ೧೨ ಇಂಚು ಎತ್ತರದ್ದಾಗಿದೆ. ಪಾಶ ಅಂಕುಶ, ಬಿಲ್ಲುಬಾಣಗಳನ್ನು ಕೈಯಲ್ಲಿ ಹಿಡಿದಿರುವ ಚತುರ್ಭುಜೆ ದೇವಿಯ ಪ್ರತಿಮೆಗೆ ಕೇವಲ ಧಾರ್ಮಿಕ ಕಾರಣಗಳಿಗಾಗಿ ಮುಖ್ಯ ಅಲ್ಲ. ಇದೊಂದು ಐತಿಹಾಸಿಕ, ಸಾಂಸ್ಕೃತಿಕ ಮಹತ್ವ ಇರುವಂತಹದ್ದು. ಆಸ್ಥೆ ಮತ್ತು ಶ್ರದ್ಧೆಯ ಕಾರಣಗಳಿಂದ ಮೂರ್ತಿಯನ್ನು ಸಮೀಪದಿಂದ ನೋಡಲು ಸಾಧ್ಯವಿಲ್ಲದಿದ್ದರೂ ಪೂಜಾಲಂಕೃತ ವಿಗ್ರಹವನ್ನು ನೋಡುವುದೇ ಒಂದು ಸೊಬಗು. ಚಿದಾನಂದ ಅವಧೂತರೇ ಸ್ವತಃ ಪೂಜಿಸುತ್ತಿದ್ದ ಈ ವಿಗ್ರಹ ಅವರ ಕಾಲಾನಂತರ ಗಡ್ಡದ ಮನೆ ಸೇರಿಕೊಂಡಿತು. ಸದ್ಯ ಸುರಪುರ ನಿವಾಸಿಗಳಾಗಿರುವ ಕನಕಗಿರಿ ಮೂಲದ ಗಡ್ಡದ ಮನೆತನದ ಹಿರಿಯರಿಗೆ ಈ ಪ್ರತಿಮೆಯನ್ನು ಸ್ವತಃ ಅವಧೂತರೇ ತಮ್ಮ ಕೊನೆಯ ದಿನಗಳಲ್ಲಿ ನಿತ್ಯಪೂಜೆ ನಡೆಸುವಂತೆ ಸೂಚಿಸಿ ಹಸ್ತಾಂತರ ಮಾಡಿದರು ಎಂಬ ಐತಿಹ್ಯ ಇದೆ. ವೆಂಕಣ್ಣಭಟ್ಟರು ಈ ಐ...
ಬಸವೇಶ್ವರ ಮತ್ತು ಅವನ ಕಾಲ ಡಾ . ಪಿ . ಬಿ . ದೇಸಾಯಿ ಕನ್ನಡಕ್ಕೆ : ಪ್ರೊ . ಸದಾನಂದ ಕನವಳ್ಳಿ ಪರಿಷ್ಕರಣೆ : ಡಾ . ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಕಾಶಕರು : ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ ಗದಗ . ‘ ನೋಯುವ ಹಲ್ಲಿನ ಕಡೆಗೇ ನಾಲಿಗೆ ಹೊರಳುತ್ತದೆ ’ ಎಂದು ಹೆಸರಾಂತ ನಾಟಕಕಾರ ಗಿರೀಶ್ ಕಾರ್ನಾಡರು ತಮ್ಮ ‘ ತಲೆದಂಡ ’ ಕಕ್ಕಾಗಿ ಬರೆದ ಮಾತುಗಳಲ್ಲಿ ದಾಖಲಿಸಿದ್ದಾರೆ . 12 ನೇ ಶತಮಾನವು ಕರ್ನಾಟಕದ ಸಾಮಾಜಿಕ , ಧಾರ್ಮಿಕ , ಸಾಂಸ್ಕೃತಿಕ , ಸಾಹಿತ್ಯಿಕ ಭಿತ್ತಿಯ ಮೇಲೆ ಬೀರಿದ ಪ್ರಭಾವ ಮತ್ತು ಅದು ಉಂಟು ಮಾಡಿದ ಪರಿಣಾಮಗಳೆರಡೂ ಅನನ್ಯ . ‘ ಬಸವಯುಗ ’ ಎಂದು ಕರೆಯಬಹುದಾದ ಕಾಲಘಟ್ಟ ಅದು . ಈ ಬಗ್ಗೆ ಸಾವಿರಾರು ಪುಟಗಳಷ್ಟು ಬರವಣಿಗೆ - ಸಾಹಿತ್ಯ ಪ್ರಕಟವಾಗಿದೆ . ಪ್ರಕಟವಾಗುತ್ತಲೇ ಇದೆ . ಹನ್ನೆರಡನೇ ಶತಮಾನದ ಚಳವಳಿಯು ನಾಟಕ - ಕಾದಂಬರಿ ಸೇರಿದಂತೆ ಸೃಜನಶೀಲ ಬರವಣಿಗೆಗಳಲ್ಲಿ ದಾಖಲಾಗಿದೆ . ಲಂಕೇಶ್ ಅವರ ‘ ಸಂಕ್ರಾಂತಿ ’ (1971), ಎಚ್ . ಎಸ್ . ಶಿವಪ್ರಕಾಶ್ ಅವರ ‘ ಮಹಾಚೈತ್ರ ’ (1986), ಗಿರೀಶ್ ಕಾರ್ನಾಡರ ‘ ತಲೆದಂಡ ’ (1991) ಮತ್ತು ಚಂದ್ರಶೇಖರ ಕಂಬಾರರ ‘ ಶಿವರಾತ್ರಿ ’ (2011), ಇತ್ತೀಚಿಗೆ ಪ್ರದರ್ಶನ ಕಂಡ ನಟರಾಜ ಹುಳಿಯಾರ್ ಅವರ ‘ ಮುಂದಣ ಕಥನ ’ (2017) ಗಳು ಬಸವಯುಗದ ಕುರಿತ ರಂಗದ ಮೇಲೆ ನಡೆದ ಸೃಜನಶೀಲ ಪ್ರಯೋಗಗಳು . ಅಷ್ಟು ಮಾತ್ರವಲ್ಲದೆ ಸಾಹಿತ್ಯ ಮತ್ತು ರಂಗಭೂಮಿಯು ತೋರಿದ ಸಾಂಸ್ಕೃತಿ...
ಮಾತು ಮುಗಿದಿಲ್ಲ (ಲೇಖಕರ ಒಡನಾಟ) ಸಿದ್ಧಲಿಂಗ ಪಟ್ಟಣಶೆಟ್ಟಿ ಪುಟಗಳು ೨೪೦, ಬೆಲೆ ೨೪೦ ಅನನ್ಯ ಪ್ರಕಾಶನ, ಹೂಮನೆ, ಶ್ರೀದೇವಿನಗರ, ವಿದ್ಯಾಗಿರಿ, ಧಾರವಾಡ-೫೮೦೦೦೪ ಕವಿ ಮತ್ತು ಸೃಜನಶೀಲ ಅನುವಾದಕ ಎಂದು ಗುರುತಿಸಲಾಗುವ ಪಟ್ಟಣಶೆಟ್ಟಿ ಅವರು ’ಚಹಾದ ಜೋಡಿ ಚೂಡಾದ್ಹಾಂಗ’ ಅಂಕಣದ ಮೂಲಕ ಚಿರಪರಿಚಿತರು. ಹದಿನೆಂಟು ಕವನ ಸಂಕಲನ ಹಾಗೂ ಹದಿನೆಂಟು ಅನುವಾದಿತ ನಾಟಕಗಳನ್ನು ಪ್ರಕಟಿಸಿರುವ ಅವರ ೧೧ನೇ ಗದ್ಯ ಬರೆಹಗಳ ಸಂಕಲನವಿದು. ಉತ್ತರ ಕರ್ನಾಟಕದ ಆಡುಮಾತನ್ನು ಬಳಸಿ ಬರೆಯುವ ಅವರ ಗದ್ಯವು ಸಹಜ ಮಾತಿನ ಲಯವನ್ನು ವಿಸ್ತರಿಸಿ ಕವಿತೆಯಾಗಿ ಬಿಡಬಲ್ಲದು. ಸರಾಗವಾಗಿ ಓದಿಸಿಕೊಂಡು ಹೋಗುವ ಲವಲವಿಕೆಯ ಗದ್ಯ ಅವರದು. ದಟ್ಟ ನೆನಪಿನ ಓಣಿಯಲ್ಲಿ ಓಡಾಡುತ್ತ ಅಲ್ಲಿನ ವ್ಯಕ್ತಿ ವಿವರ, ಘಟನೆ- ಸಂಗತಿಗಳನ್ನು ಕರಾರುವಾಕ್ಕಾಗಿ ಪದಕ್ಕಿಳಿಸುವ ಕೌಶಲ ಪಟ್ಟಣಶೆಟ್ಟರಿಗೆ ಸಿದ್ಧಿಸಿದೆ. ಹಾಗೆ ದಾಖಲಿಸುವಾಗ ಅದರ ತಾಜಾತನ ಕಳೆದುಹೋಗದಂತೆ ಅವರು ಬರೆಯಬಲ್ಲರು. ಧಾರವಾಡ ಕೇಂದ್ರಿತ ಉತ್ತರ ಕರ್ನಾಟಕದ ಲೇಖಕ-ಕವಿಗಳ ಜೊತೆಗಿನ ಒಡನಾಟದ ಗಳಿಗೆಯನ್ನು ದಾಖಲಿಸುವ ’ಮಾತು ಮುಗಿದಿಲ್ಲ’ ಸಂಕಲನವು ಒಟ್ಟು ಹದಿನಾರು ಬರೆಹಗಳನ್ನು ಒಳಗೊಂಡಿದೆ. ಅದರಲ್ಲಿ ಎರಡು ಲೇಖನಗಳು ಬೇಂದ್ರೆಯವರನ್ನು ಕುರಿತವುಗಳಾಗಿದ್ದರೆ ಮತ್ತೆರಡು ಗಿರಡ್ಡಿ ಗೋವಿಂದರಾಜ ಅವರನ್ನು ಕುರಿತವು. ’ಸಂಕ್ರಮಣ’ ಸಾಹಿತ್ಯ ಪತ್ರಿಕೆ ಆರಂಭಿಸಿ ಸಾಹಿತ್ಯಕ-ಸಾಂಸ್ಕೃತಿಕ ಲೋಕದಲ್ಲಿ ಅದಕ್ಕೊಂದು ಛಾಪು ಮೂಡಿಸಲು ಕಾರಣರ...
ಕಾಮೆಂಟ್ಗಳು