ಹೆಸರಾಂತ ಸಂಗೀತಗಾರ ದೀನಾನಾಥ ಮಂಗೇಶ್ಕರ್ ಅವರ ಜನ್ಮಶತಮಾನೋತ್ಸವ (1990) ಸಮಾರಂಭ . ದೇಶದ ಗಣ್ಯ - ಮಾನ್ಯರೆಲ್ಲ ಭಾಗವಹಿಸಿದ್ದ ಬೃಹತ್ ವೇದಿಕೆಯಲ್ಲಿ ಚಟುವಟಿಕೆಗಳು ಚುರುಕಾಗಿ ನಡೆಯುತ್ತಿದ್ದವು . ಅದೇ ಹೊತ್ತಿಗೆ ಶ್ವೇತವರ್ಣದ ಗಡ್ಡಧಾರಿಯೊಬ್ಬರು ಸಭಾಂಗಣ ಪ್ರವೇಶಿಸಿದರು . ಅವರನ್ನು ನೋಡಿದ ದೀನಾನಾಥ ಅವರ ಪುತ್ರಿ ಲತಾ ಮಂಗೇಶ್ಕರ್ ಅವರು ವೇದಿಕೆಯಿಂದ ಕೆಳಗಿಳಿದು ಬಂದು ಹಿರಿಯರ ಕಾಲುಮುಟ್ಟಿ ನಮಸ್ಕರಿಸಿದರು . ಅವರನ್ನು ಮುಂದಿನ ಸಾಲಿನಲ್ಲಿ ಕೂಡಿಸಿ ವೇದಿಕೆಗೆ ಮರಳಿದರು . ನೀಳವಾದ ಬಿಳಿಗಡ್ಡ ಹಣೆಯಲ್ಲಿ ಕಾಸಗಲದ ಕುಂಕುಮ ಹಚ್ಚಿಕೊಂಡಿದ್ದ ವ್ಯಕ್ತಿಯು ಯಾರೋ ಸ್ವಾಮೀಜಿ ಅಥವಾ ಆಚಾರ್ಯರು ಇರಬಹುದು ಎಂದು ಬಹುತೇಕರು ಭಾವಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯ ಸ್ವಲ್ಪ ಸಮಯದ ನಂತರ ಲತಾ ಮತ್ತೊಮ್ಮೆ ಸ್ವತಃ ಕೆಳಗಿಳಿದು ಬಂದು ವಿನಮ್ರತೆಯಿಂದ ವೇದಿಕೆಯ ಮೇಲೆ ಬರುವಂತೆ ಆಹ್ವಾನಿಸಿದರು . ವೇದಿಕೆ ಹತ್ತಿದ ನಂತರ ಮೈಕ್ ಹತ್ತಿರ ಬಂದ ಲತಾ ಅವರು ’ ತಂದೆಯು ಸದಾಕಾಲ ನನ್ನ ಜತೆ ಇರುವಂತೆ ಮಾಡಿದ ಕಲಾವಿದ ಎಸ್ . ಎಂ . ಪಂಡಿತ್ ( ಸಾಂಬಾನಂದ ಮೋನಪ್ಪ ಪಂಡಿತ್ ). ಅವರ ಕಲಾಕೃತಿಯಿಂದಾಗಿ ಪ್ರತಿದಿನವೂ ನನ್ನ ತಂದೆಯ ಜತೆ ಸಂವಾದ ನಡೆಸುವುದು ಸಾಧ್ಯವಾಗಿದೆ ’ ಎಂದು ಹೇಳುತ್ತಿದ್ದಂತೆ ಭಾರೀ ಕರತಾಡನದ ಪ್ರತಿಕ್ರಿಯೆ . ಸಂಗೀ...
ತಮ್ಮ ಕಲಾಕೃತಿಗಳಲ್ಲಿ ಹೈದರಾಬಾದ್ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಕಲ್ಬುರ್ಗಿ ಸುತ್ತಲಿನ ಬದುಕಿನ ಅನುಭವ- ಜೀವಂತಿಕೆಯನ್ನು ಚಿತ್ರಿಸುವ ವಿ.ಜಿ. ಅಂದಾನಿಯವರು ಪ್ರಾದೇಶಿಕ ಅನನ್ಯ ಶೈಲಿಯ ಮೂಲಕ ಹೆಸರುವಾಸಿಯಾಗಿರುವವರು. ಕಲ್ಬುರ್ಗಿಯಂತಹ ಬರಡು ನೆಲದಲ್ಲಿ ` ಐಡಿಯಲ್ ಫೈನ್ ಆರ್ಟ್ ಸ್ಕೂಲ್ ' ಮೂಲಕ ಕಲಾಪರಂಪರೆಯನ್ನು ಹುಟ್ಟುಹಾಕಿರುವ ಅಂದಾನಿಯವರು ತಮ್ಮ ಕುಟುಂಬ , ನೆನಪು- ಹಳಹಳಿಕೆ- ಕನಸುಗಳನ್ನು ಮನಬಿಚ್ಚಿ ಮಾತನಾಡುತ್ತಾರೆ. ` ನಮ್ಮೂರು ಕಲ್ಬುರ್ಗಿಗೆ 25 ಕಿ.ಮೀ. ದೂರದಲ್ಲಿರುವ ಕಿರಣಗಿ. ನಾ ಸಣ್ಣಾವ್ದಿದಾಗ ನಮ್ಮದು ಜಾಯಿಂಟ್ ಫ್ಯಾಮಿಲಿ. ಒಬ್ಬ ಅಕ್ಕ ಸೇರಿದಂತೆ 11 ಸಹೋದರರಲ್ಲಿ ನಾನೇ ಕಡೆಯವ. ನಿಜಾಂ ಕಾಲದಲ್ಲಿ ಪಟವಾರಿ ಆಗಿದ್ದ ಅಜ್ಜ ಭಾರೀ ಮನಸ್ಯಾ ಇದ್ದ . ಅವನಿಂದಾನೇ ಮನ್ಯಾಗ ಎಲ್ಲರಿಗಿ ಎಜ್ಯುಕೇಷನ್ ಸಿಕ್ಕಿದ್ದು. ಆದ್ರ ನಮ್ಮ ಫಾದರ್ ಮಾತ್ರ ಪೂರ್ತಿ ಹೊಲಾನೇ ನಂಬಿ ಬದುಕಿದ್ದವರು. ನನಗೂ ಒಕ್ಕಲತನದ ಮ್ಯಾಲ ಭಾಳ ಒಲವ ಐತಿ. ಈಗೀಗ ಕಲ್ಬುರ್ಗಿ ಊರ ಹೊರಗ ಒಂದೀಟು ಹೊಲ ತಗೊಂಡು ತೋಟ-ಪಟ್ಟಿ ತರಹ ಮಾಡಬೇಕು ಅಂತ ಅಂದುಕೊಂಡೀನಿ ' ಎಂದು ತಮ್ಮ ಹಿನ್ನೆಲೆ ಮತ್ತು ` ಕನಸು ' ವಿವರಿಸುತ್ತಾರೆ. ` ನಮ್ಮೂರಿಗೆ ಸನೀಪದ ದೊಡ್ಡ ಊರಂದ್ರ ಎಸಿಸಿ ಫ್ಯಾಕ್ಟರಿಯಿಂದ ಫೇಮಸ್ ಆಗಿದ್ದ ಶಹಾಬಾದ. ಅಲ್ಲಿಗೆ ಸಿನಿಮಾ ನೋಡುದಕ್ಕೆ ಹೋಗ್ತಿದ್ವಿ. ನಾನು ` ಆವಾರಾ ', `420' ನೋಡಿದ್ದೆಲ್ಲಾ ಅಲ್ಲಿಯೇ. ಆಗೇ ನಾಕಾರು ಸರ...
ತಮ್ಮ ನೇರ , ನಿಷ್ಠುರ ಮಾತುಗಳಿಂದ ಸಾಂಸ್ಕೃತಿಕ ವಲಯದ ನೈತಿಕ ಎಚ್ಚರವನ್ನು ಜಾಗೃತವಾಗಿಡುತ್ತಿದ್ದ ಉಸ್ತಾದ್ ವಿಲಾಯತ್ ಖಾನ್ ಹಿಂದೂಸ್ತಾನಿ ಸಂಗೀತ ಪರಂಪರೆಯಲ್ಲಿ ಮೂಡಿಬಂದ ಅಪರೂಪದ ನಕ್ಷತ್ರಗಳಲ್ಲಿ ಒಬ್ಬರು . `ಬೀನ್ಕಾರ್' ಶೈಲಿಯಲ್ಲಿ ಪ್ರಚಲಿತವಾಗಿದ್ದ ಸಿತಾರ ವಾದನ ಪರಂಪರೆಗೆ ` ಗಾಯಕಿ ಅಂಗ್ ' ಸೇರಿಸಿದ ಹಿರಿಮೆ ಇವರದು . ಸಿತಾರ್ ವಾದನದಲ್ಲಿ ಗಾಯನ ಶೈಲಿ ಅಳವಡಿಸಿ ಅದಕ್ಕೆ ಅಗತ್ಯವಾಗಿದ್ದ ಸಿತಾರನ್ನು ರೂಪಿಸಿಕೊಂಡವರು . ನಾಲ್ಕು ತಲೆಮಾರುಗಳ ಸಂಗೀತ ಪರಂಪರೆ ಇರುವ ಕುಟುಂಬದಲ್ಲಿ ಜನಿಸಿದ ವಿಲಾಯತ್ ತಂದೆ ಉಸ್ತಾದ್ ಇನಾಯತಖಾನ್ ರಲ್ಲಿ ಸಿತಾರ್ ವಾದನ ಕಲಿಯಲು ಆರಂಭಿಸಿದರು . ವಿಲಾಯತ್ ಬಾಲಕರಾಗಿದ್ದಾಗ ಒಮ್ಮೆ ಅವರ ತಂದೆ ಸಿತಾರ್ ವಾದನ ಪ್ರಸ್ತುತ ಪಡಿಸುತ್ತಿರುವಾಗ ` ಕಣ್ಮುಂದೆ ಹಳದಿ ಬಣ್ಣವೇ ಹರಡಿ ' ದಂತಾಗಿದ್ದನ್ನು ತಂದೆಗೆ ಹೇಳಿದರು . ಅದಕ್ಕೆ ಇನಾಯತಖಾನರು ` ಬುದ್ದು , ನಾನೀಗ ನುಡಿಸಿದ್ದ ` ಬಸಂತ್ ' ರಾಗ ' ಎಂದು ಹೇಳಿದ್ದರು . ಸಂಗೀತದಲ್ಲಿ ಬಣ್ಣದ ಛಾಯೆ ಕಂಡ ವಿಲಾಯತರಿಗೆ ತಂದೆಯಿಂದ ಹೆಚ್ಚಿನ ಸಿತಾರ್ ಶಿಕ್ಷಣ ದೊರೆಯಲಿಲ್ಲ . ಕೇವಲ ಹತ್ತು ವರ್ಷದವರಾಗಿದ್ದಾಗಲೇ ಪಿತೃವಿಯೋಗಕ್ಕೆ ಒಳಗಾಗಬೇಕಾಯಿತು . ವಿಧಿಯಾಟದಿಂದ ನೊಂದ ವಿಲಾಯತರಿಗೆ ಅಜ್ಜ ಉಸ್ತಾದ್ ಬಂದೆ ಹುಸೇನ್ ಖಾನ್ ( ತಾಯಿಯ ತಂದೆ ) ಮತ್...
ಕಾಮೆಂಟ್ಗಳು