ಎಸ್.ಎಂ. ಪಂಡಿತ್
ಹೆಸರಾಂತ ಸಂಗೀತಗಾರ ದೀನಾನಾಥ ಮಂಗೇಶ್ಕರ್ ಅವರ ಜನ್ಮಶತಮಾನೋತ್ಸವ (1990) ಸಮಾರಂಭ . ದೇಶದ ಗಣ್ಯ - ಮಾನ್ಯರೆಲ್ಲ ಭಾಗವಹಿಸಿದ್ದ ಬೃಹತ್ ವೇದಿಕೆಯಲ್ಲಿ ಚಟುವಟಿಕೆಗಳು ಚುರುಕಾಗಿ ನಡೆಯುತ್ತಿದ್ದವು . ಅದೇ ಹೊತ್ತಿಗೆ ಶ್ವೇತವರ್ಣದ ಗಡ್ಡಧಾರಿಯೊಬ್ಬರು ಸಭಾಂಗಣ ಪ್ರವೇಶಿಸಿದರು . ಅವರನ್ನು ನೋಡಿದ ದೀನಾನಾಥ ಅವರ ಪುತ್ರಿ ಲತಾ ಮಂಗೇಶ್ಕರ್ ಅವರು ವೇದಿಕೆಯಿಂದ ಕೆಳಗಿಳಿದು ಬಂದು ಹಿರಿಯರ ಕಾಲುಮುಟ್ಟಿ ನಮಸ್ಕರಿಸಿದರು . ಅವರನ್ನು ಮುಂದಿನ ಸಾಲಿನಲ್ಲಿ ಕೂಡಿಸಿ ವೇದಿಕೆಗೆ ಮರಳಿದರು . ನೀಳವಾದ ಬಿಳಿಗಡ್ಡ ಹಣೆಯಲ್ಲಿ ಕಾಸಗಲದ ಕುಂಕುಮ ಹಚ್ಚಿಕೊಂಡಿದ್ದ ವ್ಯಕ್ತಿಯು ಯಾರೋ ಸ್ವಾಮೀಜಿ ಅಥವಾ ಆಚಾರ್ಯರು ಇರಬಹುದು ಎಂದು ಬಹುತೇಕರು ಭಾವಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯ ಸ್ವಲ್ಪ ಸಮಯದ ನಂತರ ಲತಾ ಮತ್ತೊಮ್ಮೆ ಸ್ವತಃ ಕೆಳಗಿಳಿದು ಬಂದು ವಿನಮ್ರತೆಯಿಂದ ವೇದಿಕೆಯ ಮೇಲೆ ಬರುವಂತೆ ಆಹ್ವಾನಿಸಿದರು . ವೇದಿಕೆ ಹತ್ತಿದ ನಂತರ ಮೈಕ್ ಹತ್ತಿರ ಬಂದ ಲತಾ ಅವರು ’ ತಂದೆಯು ಸದಾಕಾಲ ನನ್ನ ಜತೆ ಇರುವಂತೆ ಮಾಡಿದ ಕಲಾವಿದ ಎಸ್ . ಎಂ . ಪಂಡಿತ್ ( ಸಾಂಬಾನಂದ ಮೋನಪ್ಪ ಪಂಡಿತ್ ). ಅವರ ಕಲಾಕೃತಿಯಿಂದಾಗಿ ಪ್ರತಿದಿನವೂ ನನ್ನ ತಂದೆಯ ಜತೆ ಸಂವಾದ ನಡೆಸುವುದು ಸಾಧ್ಯವಾಗಿದೆ ’ ಎಂದು ಹೇಳುತ್ತಿದ್ದಂತೆ ಭಾರೀ ಕರತಾಡನದ ಪ್ರತಿಕ್ರಿಯೆ . ಸಂಗೀ...
ಕಾಮೆಂಟ್ಗಳು