ಪೋಸ್ಟ್‌ಗಳು

1857 ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

’೧೮೫೭ರ ಸಿಪಾಯಿದಂಗೆ’ ಮತ್ತು ’ಭಾಲ್ಕಿ ಪಿತೂರಿ

ಇಮೇಜ್
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಸರಿಯಾಗಿ ೬೧ ವರ್ಷಗಳು ಪೂರ್ಣಗೊಂಡಿವೆ. ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಹೋರಾಟ ಆರಂಭವಾಗಿ ೧೫೧ ವರ್ಷಗಳಾಗಿವೆ. ಸತತ ೯೦ ವರ್ಷಗಳ ಕಾಲ ನಡೆದ ಹೋರಾಟದಲ್ಲಿ ಭಾಗಿಯಾದ ಬಹುತೇಕರು `ಕಾಲ'ನ ಮನೆ ಸೇರಿದ್ದಾರೆ. ಹೊರಾಟ ಮತ್ತು ಅದರ ನೆನಪುಗಳು ಇತಿಹಾಸದ ಪುಟ ಸೇರಿವೆ. ಹಲವು ಪ್ರಸಂಗ- ಘಟನೆಗಳು ಪುಸ್ತಕದ ಪುಟಗಳಲ್ಲಿ ಮರೆತು ಹೋಗಿವೆ. ಮರೆತು ಹೋದ, ಆದರೆ , ಮರೆಯಬಾರದ ಒಂದು ಘಟನೆಯ ವಿವರ ಇಲ್ಲಿದೆ- **** ೧೮೫೭ರ ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೂ ಬೀದರ್ ಜಿಲ್ಲೆಯ ಭಾಲ್ಕಿಗೂ ಏನು ಸಂಬಂಧ? ವಿದೇಶಿ ವಿದ್ವಾಂಸರು `ಸಿಪಾಯಿ ದಂಗೆ' ಗುರುತಿಸುವ `ಮೊದಲ ಸ್ವಾತಂತ್ರ್ಯ ಸಂಗ್ರಾಮ' ಆರಂಭವಾದದ್ದು ಸರಿಯಾಗಿ ೧೫೧ ವರ್ಷಗಳ ಹಿಂದೆ. ಸತತ ಹತ್ತು ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ನಡೆದ ದಂಗೆ- ಪಿತೂರಿಗಳು ಕಂಪೆನಿ ಸರ್ಕಾರವನ್ನು ಕಂಗೆಡಿಸ್ದಿದವು. ಸರಿಯಾಗಿ ಹತ್ತು ವರ್ಷಗಳ ನಂತರ `ಭಾಲ್ಕಿ ಪಿತೂರಿ'ಯನ್ನು ವಿಫಲಗೊಳಿಸುವ ಮೂಲಕ ಬ್ರಿಟಿಷರು ಮೊದಲ ಹೋರಾಟವನ್ನು ಸಂಪೂರ್ಣವಾಗಿ ಕೊನೆಗೊಳಿಸುವಲ್ಲಿ ಯಶಸ್ವಿಯಾದರು. ಆ ಕಥೆಯ ಕೆಲವು ಐತಿಹಾಸಿಕ ವಿವರಗಳು ಇಲ್ಲಿವೆ- ೧೮೫೭ಮೇ ೧೦ರಂದು ಮೀರತ್‌ನಲ್ಲಿ ಮತ್ತು ಅಂಬಾಲಾಗಳ ಬ್ರಿಟಿಷ್ ಸೇನಾ ಪಡೆಯಲ್ಲಿ ಆರಂಭವಾದ ದಂಗೆಯು ರಾಷ್ಟ್ರದ ಹಲವೆಡೆಗಳಲ್ಲಿ ಪಸರಿಸಿತು. ಭಾರತೀಯರು ನಡೆಸಿದ ೧೮೫೭ರ ಹೋರಾಟದ ತಕ್ಷಣದ ಕಾರಣ ಬಂದೂಕಿನ ತೋಟಾಗಳಿಗೆ `ಹಂದಿ ಮತ್ತು ಗೋವಿನ ಕ...