ಪೋಸ್ಟ್‌ಗಳು

2018 ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕರ್ನಾಟಕ ಚುನಾವಣಾ ಫಲಿತಾಂಶ ಮತ್ತು 2019ರ ಲೋಕಸಭಾ ಚುನಾವಣೆ

ಕರ್ನಾಟಕದ ವಿಧಾನಸಭಾ ಚುನಾವಣೆಯನ್ನು ಮಾಧ್ಯಮಗಳು ಮತ್ತು ರಾಜಕೀಯ ವಿಶ್ಲೇಷಕರು 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದು ಬಿಂಬಿಸಿವೆ. ಮೇಲ್ನೋಟಕ್ಕೆ ಅದು ಸರಿ ಎಂದು ಕೂಡ ಅನ್ನಿಸುತ್ತಿತ್ತು. ಅನ್ನಿಸುತ್ತಿದೆ. ರಾಜಕಾರಣದಲ್ಲಿ ಕಂಡದ್ದು, ಕೇಳಿದ್ದು ಮಾತ್ರ ‘ಸತ್ಯ’ ಅಲ್ಲ. ಹಾಗಾದರೆ ಕರ್ನಾಟಕದ ಚುನಾವಣೆಯು ಸೆಮಿಫೈನಲ್ ಅಲ್ಲವೇ? ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆಟದ ನಿಯಮಗಳು ರಾಜಕೀಯಕ್ಕೆ ಅನ್ವಯಿಸುವುದಿಲ್ಲ. ಜನ ರಾಜಕೀಯ ಆಯ್ಕೆಯನ್ನು ಆಟದ ರೀತಿಯಲ್ಲಿ ಮನರಂಜನೆ ಎಂದು ಭಾವಿಸುವುದಿಲ್ಲ. ಯಾಕೆಂದರೆ ಅವರಿಗೆ ತಮ್ಮ ಆಯ್ಕೆ ಉಂಟು ಮಾಡುವ ಅಪಾಯದ ಅರಿವು –ಮುನ್ಸೂಚನೆ ಇದ್ದೇ ಇರುತ್ತದೆ. ಎರಡು ಚುನಾವಣೆಯ ನಡುವಿನ ಅವಧಿಯಲ್ಲಿ ‘ಮತದಾರ ಪ್ರಭು’ ಅಸಹಾಯಕ. ಅದು ಅವನಿಗೆ ಗೊತ್ತಿರದ ಸಂಗತಿಯೇನಲ್ಲ. ಸಣ್ಣಪುಟ್ಟ ಬದಲಾವಣೆ- ಘಟನೆ-ಬೆಳವಣಿಗೆಗಳೂ ಸಂಕೇತ-ಸೂಚನೆ ನೀಡುತ್ತವೆ ಎನ್ನುವುದು ಒಂದು ಹಂತದ ಮಟ್ಟಿಗಿನ ತರ್ಕಕ್ಕೆ ಸರಿ. ತರ್ಕವು ಸತ್ಯದ ಸಮೀಪ ಹೋಗಬಹುದಾದ ದಾರಿ ಮಾತ್ರ. ತರ್ಕದಿಂದಲೇ ಸತ್ಯವನ್ನು ಅರಿಯಲು-ಪಡೆಯಲು ಸಾಧ್ಯವಿಲ್ಲ. ಹಾಗಾದರೆ ಅದು ಹೇಗೆ ಸಿಗುತ್ತದೆ? ಅದನ್ನು ಪಡೆಯುವ ಕ್ರಮ ಏನು? ಅದು ವರ್ತಮಾನವನ್ನು ಹಿಡಿಯುವ ಹಂಬಲದ ಹಾಗೆ. ಸಿಕ್ಕಿತು ಎಂದು ಅನ್ನಿಸುವ ವೇಳೆಗಾಗಲೇ ಅದು ಬದಲಾಗಿ ಬಿಟ್ಟಿರುತ್ತದೆ. ಅದಿರಲಿ. ಒಮ್ಮೆ ಓಟು ಕೊಟ್ಟ ಮೇಲೆ ಮತದಾರ ಮೂಕ ಪ್ರೇಕ್ಷಕ ಆಗುತ್ತಾನೆ. ಐದು ವರ್ಷದ ವರೆಗೆ ಬರಿ ನೋಡುವುದಷ್ಟೇ ಅ...