ಪೋಸ್ಟ್‌ಗಳು

Bendre ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕವಿಗಳ ಕಾಣಿಕಿ- ಬೀದರ್ ಕವಿಗೋಷ್ಠಿಗಾಗಿ ಬೇಂದ್ರೆ ಬರೆದ ಕವಿತೆ

ಇಮೇಜ್
ಕವಿಗಳ ಕಾಣಿಕಿ ೧ ಸಲಾಮ್ ಮಾಡ್ತೇವಿ ಶಾಹೀರಿ ವಾಣೀಗೆ ಜಗ ಜಾಹೀರ ವಜ್ರದ ಖಾಣೀಗೆ ಕಾಳಾ ಬಝಾರ ಹಜಾರ ಇದ್ರೂ ಬಾಳೋ ಉಸಿರಿಗೆ ಒಂದೇ ಹೆಸರು: ಅದು ಕವಿ ಕವೀ ಕಾಣಿಕೀ ಅದಕ್ಕ ಬೇಕಿಲ್ಲ ಬ್ಯಾರೆ ಆನಿಕಿ ೨ ಬೀದರಕ್ಕ ಆದಾವರೆಷ್ಟೋ? ಹೋದಾವರೆಷ್ಟೋ? ಆಗದವರೂ ಇದ್ದಾರು ಹೋಗದವರೂ ಇದ್ದಾರು ಬರೋ ಅವರಿಗೆ ಬಾಗಿಲಾ ತೆರದ ಅವ ಹೋಗೋ ಅವರ ಹಾದಿ ಮುಚ್ಚಿಲ್ಲ ೩ ಪ್ರಜಾ ಇಲ್ಲದ ರಾಜಾ ಯಾವ ಖಾ ಜಾ? ಯಾವ ಭಾಷಾದಾಗ ಊದಿರಿ ಬೇಂಡಬಾಜಾ ಕನ್ನಡೀ-ಮರಾಠೀ-ತೇಲಂಗೀ ಊರ್ದೂ, ಪಾರಸೀ, ಅರಬ್ಬೀ ಹಿಂದೀ, ಹಿಂದಿನದೂ, ಇಂದಿನದೂ, ಮುಂದಿನದೂ ಸಂಸ್ಕೃತಾ, ಪ್ರಾಕೃತಾ, ಅಪಭ್ರಂಶಾ, ಪೈಶಾಚಿ  ೪ ಹೊಡೋ ಗಾಡೀ ದ್ರಾವಿಡೀ, ಶಾಬರೀ, ಪುಳಿಂದೀ, ಗೊಂಡೀ ಕರಣದಾಗ ನಾಟಿದ್ದು ನಾಟಲಿ ಉಳಿದದ್ದು ದಾಟಲೀ ಸೋಳಾ ದೇಶಾ, ಸೋಳಾ ಭಾಷಾ, ಸೋಳಾ ಅಂಗೀ ಭಾವ ಇದ್ಹಾಂಗ ಜೀವ, ಜೀವಲಿಂಗೀ ೫ ಹಳೇ ಗೊಂಡಾರಣ್ಯದ ಗಂಗಾಲಹರಿ, ಗೋದಾವರೀ ಇನ್ನೂ ಹರೀತನ ಅದ ಉತ್ತರಕ್ಕ ಬೀದರದ ಹತ್ತರ ಹತ್ತರಕ್ಕ ೬ ’ಅಹಂ ರಾಷ್ಟೀ ಸಂಗಮನೀ’ ದೇಹದಾಗ ಸ್ನೇಹ ಇರದಿದ್ದರ ಮನದ ಮೊನೀಯೊಳಗ ದೀಪ ಎಲ್ಲೀದು? ಜನದ ಜಾತಿ ನೂರಾದರೂ ಜ್ಯೋತಿ ನೂರಾ ಒಂದು ಒಂದು ಬಿಂದುವಿಗೇ ನೂರು ಸಂದು ಸಾವಿರದವರ ಲಕ್ಷ್ಯ ಜೀವ ಕೋಟಿ ಕಡಿಗೆ ಅಬ್ಜದಾಗ ರಸದ ಅಡಿಗೆ ೭ ಹಿಂದುಸ್ಥಾನ, ಪಾಕಿಸ್ಥಾನ ಒಂದಾಗಬೇಕು ’ಭಾರತ ಹಮಾರಾ’ ಮುಂದಾಗಬೇಕು ಮನಕ್ಕೊಂದು ಮತಂ ಮಾಡಿ ಜನ ಧರ್ಮ ಖತಂ ಮಾಡಬ್ಯಾಡ್ರಿ ೮ ಹೋ...

ಅಂಬಿಕಾತನಯದತ್ತ ಅಲ್ಲ; ಪತ್ರಕರ್ತ ಬೇಂದ್ರೆ

ಇಮೇಜ್
ಪಟ್ಟ ಪಾಡನ್ನೇ ಹಾಡಾಗಿಸಿ ' ಕಾವ್ಯೋದ್ಯೋಗ ' ಮಾಡಿದ ವರಕವಿ ದ . ರಾ . ಬೇಂದ್ರೆ ತುತ್ತಿನಚೀಲ ತುಂಬಿಸಿಕೊಳ್ಳುವುದಕ್ಕಾಗಿ - ಹವ್ಯಾಸಕ್ಕಾಗಿ ಪತ್ರಿಕೆಗಳನ್ನು ಆರಂಭಿಸಿ - ಸಂಪಾದಕರಾಗಿ ಪತ್ರಕರ್ತರಾಗಿ ಕೆಲಸ ಮಾಡಬೇಕಾಯಿತು . ಚಲನಶೀಲ ಪ್ರತಿಭೆ ತನ್ನತನ ಕಂಡುಕೊಳ್ಳಲು ಹಲವಾರು ಸಾಧ್ಯತೆಗಳನ್ನು ಪ್ರಯತ್ನಿಸುತ್ತಿರುತ್ತದೆ . ನೆಲೆ ಸಿಕ್ಕ ತಕ್ಷಣ ಅಲ್ಲಿ ತಳ ಊರುತ್ತದೆ . ಆದರೆ , ಬೇಂದ್ರೆಯವರು ಕಾವ್ಯಲೋಕದಲ್ಲಿ ಗತಿ ಸಿಕ್ಕ ಮೇಲೂ ` ಹೊಟ್ಟೆಪಾಡಿಗಾಗಿ ' ಸಾಹಿತ್ಯ ಪತ್ರಿಕೋದ್ಯಮವನ್ನು ಅವಲಂಬಿಸಿದ್ದರು ಎಂಬುದು ಕುತೂಹಲ ಹುಟ್ಟಿಸುವ ಸಂಗತಿ . ಕೈಬರಹದ ಪತ್ರಿಕೆಗಳಾದ ' ಕೊಳಲು ', ' ಗೆಳೆಯ ', ` ನಸುಕು ' ಮತ್ತು ಮುದ್ರಣ ಕಂಡ ' ಸ್ವಧರ್ಮ ' ವನ್ನು ಕಾವ್ಯಾಸಕ್ತಿ ಮತ್ತು ಹವ್ಯಾಸಕ್ಕಾಗಿ ಆರಂಭಿಸಿದ್ದ ಬೇಂದ್ರೆಯವರು ಮಾಸ್ತಿಯವರ ಸಹಾಯದಿಂದ ` ಜೀವನ ' ಮಾಸಪತ್ರಿಕೆಯನ್ನು ಸಂಪಾದಿಸಿ ಪ್ರಕಟಿಸಿದ್ದರು. '1940 ರ ವರೆಗೆ ಎಲ್ಲೂ ಕೆಲಸ ಸಿಕ್ಕದೆ ಅಣ್ಣ ಮಾಸ್ತಿಯವರ ವಾತ್ಸಲ್ಯದ ಬೆಂಬಲದಿಂದ ಜೀವನ ಸಂಪಾದಕನೆಂದು ಗೌರವದಿಂದ ಅಲೆದಾಡಿದೆ '' ಎಂದು ತಮ್ಮ ಆತ್ಮಕತೆ ` ಕಾವ್ಯೋದ್ಯೋಗ ' ದಲ್ಲಿ ಬೇಂದ್ರೆ ಬರೆದಿದ್ದಾರೆ. ಪತ್ರಿಕೆಗಳನ್ನು ನಡೆಸಿದ ಅವಧಿಯಲ್ಲಿ ಬೇಂದ್ರೆಯವರು ವೈವಿಧ್ಯಮ...