ಪಟ್ಟ ಪಾಡನ್ನೇ ಹಾಡಾಗಿಸಿ ' ಕಾವ್ಯೋದ್ಯೋಗ ' ಮಾಡಿದ ವರಕವಿ ದ . ರಾ . ಬೇಂದ್ರೆ ತುತ್ತಿನಚೀಲ ತುಂಬಿಸಿಕೊಳ್ಳುವುದಕ್ಕಾಗಿ - ಹವ್ಯಾಸಕ್ಕಾಗಿ ಪತ್ರಿಕೆಗಳನ್ನು ಆರಂಭಿಸಿ - ಸಂಪಾದಕರಾಗಿ ಪತ್ರಕರ್ತರಾಗಿ ಕೆಲಸ ಮಾಡಬೇಕಾಯಿತು . ಚಲನಶೀಲ ಪ್ರತಿಭೆ ತನ್ನತನ ಕಂಡುಕೊಳ್ಳಲು ಹಲವಾರು ಸಾಧ್ಯತೆಗಳನ್ನು ಪ್ರಯತ್ನಿಸುತ್ತಿರುತ್ತದೆ . ನೆಲೆ ಸಿಕ್ಕ ತಕ್ಷಣ ಅಲ್ಲಿ ತಳ ಊರುತ್ತದೆ . ಆದರೆ , ಬೇಂದ್ರೆಯವರು ಕಾವ್ಯಲೋಕದಲ್ಲಿ ಗತಿ ಸಿಕ್ಕ ಮೇಲೂ ` ಹೊಟ್ಟೆಪಾಡಿಗಾಗಿ ' ಸಾಹಿತ್ಯ ಪತ್ರಿಕೋದ್ಯಮವನ್ನು ಅವಲಂಬಿಸಿದ್ದರು ಎಂಬುದು ಕುತೂಹಲ ಹುಟ್ಟಿಸುವ ಸಂಗತಿ . ಕೈಬರಹದ ಪತ್ರಿಕೆಗಳಾದ ' ಕೊಳಲು ', ' ಗೆಳೆಯ ', ` ನಸುಕು ' ಮತ್ತು ಮುದ್ರಣ ಕಂಡ ' ಸ್ವಧರ್ಮ ' ವನ್ನು ಕಾವ್ಯಾಸಕ್ತಿ ಮತ್ತು ಹವ್ಯಾಸಕ್ಕಾಗಿ ಆರಂಭಿಸಿದ್ದ ಬೇಂದ್ರೆಯವರು ಮಾಸ್ತಿಯವರ ಸಹಾಯದಿಂದ ` ಜೀವನ ' ಮಾಸಪತ್ರಿಕೆಯನ್ನು ಸಂಪಾದಿಸಿ ಪ್ರಕಟಿಸಿದ್ದರು. '1940 ರ ವರೆಗೆ ಎಲ್ಲೂ ಕೆಲಸ ಸಿಕ್ಕದೆ ಅಣ್ಣ ಮಾಸ್ತಿಯವರ ವಾತ್ಸಲ್ಯದ ಬೆಂಬಲದಿಂದ ಜೀವನ ಸಂಪಾದಕನೆಂದು ಗೌರವದಿಂದ ಅಲೆದಾಡಿದೆ '' ಎಂದು ತಮ್ಮ ಆತ್ಮಕತೆ ` ಕಾವ್ಯೋದ್ಯೋಗ ' ದಲ್ಲಿ ಬೇಂದ್ರೆ ಬರೆದಿದ್ದಾರೆ. ಪತ್ರಿಕೆಗಳನ್ನು ನಡೆಸಿದ ಅವಧಿಯಲ್ಲಿ ಬೇಂದ್ರೆಯವರು ವೈವಿಧ್ಯಮ...